TSK

TSK · ಙ್ಞಾನೋಕ್ತಿಗಳು 23:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.

ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.

ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!

ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

‹ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,›

ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,