¶ “ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.
TSK
TSK · ಙ್ಞಾನೋಕ್ತಿಗಳು 24:28
Treasury of Scripture Knowledge references in ಕನ್ನಡ IRV.
ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.
ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.
ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
¶ ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.