1 ಅರಸುಗಳು 2:33
TSK
ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
TSK
Treasury of Scripture Knowledge references in ಕನ್ನಡ IRV.
ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.
ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.
ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.