ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
TSK
TSK · ಙ್ಞಾನೋಕ್ತಿಗಳು 28:21
Treasury of Scripture Knowledge references in ಕನ್ನಡ IRV.
ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.
ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.
ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.