TSK

TSK · ಙ್ಞಾನೋಕ್ತಿಗಳು 29:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.

¶ ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.

ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.

ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.

ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.

ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.

ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.