ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.
TSK
TSK · ಙ್ಞಾನೋಕ್ತಿಗಳು 29:5
Treasury of Scripture Knowledge references in ಕನ್ನಡ IRV.
ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.
ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.
ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.
ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.