ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.
TSK
TSK · ಙ್ಞಾನೋಕ್ತಿಗಳು 29:6
Treasury of Scripture Knowledge references in ಕನ್ನಡ IRV.
ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.
ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.
ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.
ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.