ಯಾಜಕಕಾಂಡ 19:13
TSK
¶ “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
TSK
Treasury of Scripture Knowledge references in ಕನ್ನಡ IRV.
¶ “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.
ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ.
ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.