ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
TSK
TSK · ಙ್ಞಾನೋಕ್ತಿಗಳು 30:10
Treasury of Scripture Knowledge references in ಕನ್ನಡ IRV.
ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.
¶ ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.
ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.
¶ ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.