ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
TSK
TSK · ಙ್ಞಾನೋಕ್ತಿಗಳು 31:30
Treasury of Scripture Knowledge references in ಕನ್ನಡ IRV.
“ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
¶ “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.
¶ ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.