ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
TSK
TSK · ಙ್ಞಾನೋಕ್ತಿಗಳು 4:7
Treasury of Scripture Knowledge references in ಕನ್ನಡ IRV.
ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ.
ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.
ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
¶ ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
‹ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?›
¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›