¶ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
TSK
TSK · ಙ್ಞಾನೋಕ್ತಿಗಳು 6:19
Treasury of Scripture Knowledge references in ಕನ್ನಡ IRV.
ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.
ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.