ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
TSK
TSK · ಕೀರ್ತನೆಗಳು 113:7
Treasury of Scripture Knowledge references in ಕನ್ನಡ IRV.
ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.
ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.
ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?