ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.
TSK
TSK · ಕೀರ್ತನೆಗಳು 13:2
Treasury of Scripture Knowledge references in ಕನ್ನಡ IRV.
ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ?
ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ,
ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.
ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.
ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.
ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ.
ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.
ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.
ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.
ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.
ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?
ಮತ್ತು ಅವರಿಗೆ, ‹“ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ”› ಎಂದು ಹೇಳಿದನು.
‹ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.›
ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.