ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
TSK
TSK · ಕೀರ್ತನೆಗಳು 145:13
Treasury of Scripture Knowledge references in ಕನ್ನಡ IRV.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.