TSK

TSK · ಕೀರ್ತನೆಗಳು 21:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.

ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು ದುಡುಕಿನಿಂದ ಮಾತನಾಡಿದ್ದೇನೆ.

ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.

ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.

ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.

ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.

ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.

¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.

‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.

ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.

ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.