ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.
TSK
TSK · ಕೀರ್ತನೆಗಳು 34:21
Treasury of Scripture Knowledge references in ಕನ್ನಡ IRV.
ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.
ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.
ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.
ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.
ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
‹ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.›
¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,
¶ ‹“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.›
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.