ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
TSK
TSK · ಕೀರ್ತನೆಗಳು 37:21
Treasury of Scripture Knowledge references in ಕನ್ನಡ IRV.
ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.
¶ ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.