ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.
TSK
TSK · ರೋಮಾಪುರದವರಿಗೆ 1:11
Treasury of Scripture Knowledge references in ಕನ್ನಡ IRV.
¶ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.
ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.
¶ ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.
¶ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.
ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.
ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.
ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.
ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
¶ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.