‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›
TSK
TSK · ರೋಮಾಪುರದವರಿಗೆ 1:18
Treasury of Scripture Knowledge references in ಕನ್ನಡ IRV.
ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.
ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
¶ ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.
¶ ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.