TSK

TSK · ರೋಮಾಪುರದವರಿಗೆ 1:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;

ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,

ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.

ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.

ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.

ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,

ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.

ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

¶ “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.

ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.

ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.

¶ ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.

ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?