TSK

TSK · ರೋಮಾಪುರದವರಿಗೆ 1:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.

ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.

¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

¶ ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.

ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.

ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.

ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.

ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.

ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.

ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.

‹ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’›

ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.

ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.

ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.

ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.

ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.

ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.

¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.

ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.

ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.

¶ ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.

ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.