ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.
TSK
TSK · ರೋಮಾಪುರದವರಿಗೆ 10:15
Treasury of Scripture Knowledge references in ಕನ್ನಡ IRV.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
¶ ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.
ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›
¶ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.
ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;
ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ
ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.