¶ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.
TSK
TSK · ರೋಮಾಪುರದವರಿಗೆ 10:4
Treasury of Scripture Knowledge references in ಕನ್ನಡ IRV.
ಯೇಸು ಪ್ರತ್ಯುತ್ತರವಾಗಿ ಅವನಿಗೆ, ‹“ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” › ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
¶ ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.
ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.