ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
TSK
TSK · ರೋಮಾಪುರದವರಿಗೆ 11:12
Treasury of Scripture Knowledge references in ಕನ್ನಡ IRV.
ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ.
ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.