TSK

TSK · ರೋಮಾಪುರದವರಿಗೆ 11:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.

ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.

ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.

ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.

ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.

‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›

‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›

ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.

¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.

ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.