¶ ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.
TSK
TSK · ರೋಮಾಪುರದವರಿಗೆ 11:2
Treasury of Scripture Knowledge references in ಕನ್ನಡ IRV.
ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.
ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.
¶ ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,
¶ “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
¶ ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.