ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
TSK
TSK · ರೋಮಾಪುರದವರಿಗೆ 11:36
Treasury of Scripture Knowledge references in ಕನ್ನಡ IRV.
ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.
ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”
‹ನಮ್ಮನ್ನು ಶೋಧನೆಯೊಳಗೆ ಸೇರಿಸದೆ› ‹ಕೆಡುಕನಿಂದ; ನಮ್ಮನ್ನು ತಪ್ಪಿಸು›
“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”
ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.
ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
¶ ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,
ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.
¶ ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.