TSK

TSK · ರೋಮಾಪುರದವರಿಗೆ 12:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.

ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?

ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ

ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.

¶ ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.

ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.

¶ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,

ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.

¶ ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,

ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.

ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.

ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,

ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.