TSK

TSK · ರೋಮಾಪುರದವರಿಗೆ 12:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.

ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.

ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.

ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.

ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.

ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.

ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.

‹ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ›‹ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.›

‹ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.›

¶ ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”

ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.

¶ ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.

ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,

¶ ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.

ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.

¶ ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.

ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.

ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,

ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ.

ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

¶ ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.

¶ ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.

ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.