ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
TSK
TSK · ರೋಮಾಪುರದವರಿಗೆ 14:11
Treasury of Scripture Knowledge references in ಕನ್ನಡ IRV.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
¶ ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,
ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.