TSK

TSK · ರೋಮಾಪುರದವರಿಗೆ 14:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು”› ಎಂದು ಹೇಳಿದನು.

ಅದಕ್ಕೆ; ‹“ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು”› ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.

ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.

ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.

ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.

ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.