TSK

TSK · ರೋಮಾಪುರದವರಿಗೆ 14:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ ‹“ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.

ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.