ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
TSK
TSK · ರೋಮಾಪುರದವರಿಗೆ 15:16
Treasury of Scripture Knowledge references in ಕನ್ನಡ IRV.
ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.
¶ ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,
ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.
¶ ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.
¶ ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.
ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
¶ ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.
ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.
¶ ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.