TSK

TSK · ರೋಮಾಪುರದವರಿಗೆ 15:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೇಸು ಅವನಿಗೆ ‹“ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ”› ಎಂದು ಹೇಳಿದನು.

ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.

ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,

¶ ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.

ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.

ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.

ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.

ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.

¶ “ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.

ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.

ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.

ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.

ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.