ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.
TSK
TSK · ರೋಮಾಪುರದವರಿಗೆ 16:25
Treasury of Scripture Knowledge references in ಕನ್ನಡ IRV.
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, ‹“ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.›
ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
¶ ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.
¶ ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.
ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.
ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.
¶ ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.
ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,