TSK

TSK · ರೋಮಾಪುರದವರಿಗೆ 2:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.

ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.

ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.

ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.

¶ ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.

¶ ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.

¶ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.