ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
TSK
TSK · ರೋಮಾಪುರದವರಿಗೆ 2:12
Treasury of Scripture Knowledge references in ಕನ್ನಡ IRV.
‹ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು”› ಎಂದು ನಿಮಗೆ ಹೇಳುತ್ತೇನೆ ಅಂದನು.
‹ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.›
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
¶ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.