¶ ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
TSK
TSK · ರೋಮಾಪುರದವರಿಗೆ 2:13
Treasury of Scripture Knowledge references in ಕನ್ನಡ IRV.
ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›
¶ ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.
ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.