TSK

TSK · ರೋಮಾಪುರದವರಿಗೆ 2:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”

ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”

‹ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?›

¶ ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.

ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.