TSK

TSK · ರೋಮಾಪುರದವರಿಗೆ 2:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?

ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.

ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.

‹ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.›

ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.

ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.

ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.