TSK

TSK · ರೋಮಾಪುರದವರಿಗೆ 2:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?

ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

‹ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.›

ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,

ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.

ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ.

ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.

ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

¶ ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.

¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?

ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.