TSK

TSK · ರೋಮಾಪುರದವರಿಗೆ 3:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.

“ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.

‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›

¶ ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.

ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.

¶ ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.

¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.

ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ.