‹ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,›
TSK
TSK · ರೋಮಾಪುರದವರಿಗೆ 3:22
Treasury of Scripture Knowledge references in ಕನ್ನಡ IRV.
ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.
¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
¶ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?
¶ ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.