TSK

TSK · ರೋಮಾಪುರದವರಿಗೆ 3:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.

ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.