“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,
TSK
TSK · ರೋಮಾಪುರದವರಿಗೆ 4:17
Treasury of Scripture Knowledge references in ಕನ್ನಡ IRV.
ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.
ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.›
ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.
ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.
ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.
¶ ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.
¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.