TSK

TSK · ರೋಮಾಪುರದವರಿಗೆ 4:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?

ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,

ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.

ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.

ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?

ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.

¶ ನಾನು ಹೊಗಳಿಕೊಳ್ಳುವುದ್ದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ.

ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.

ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.