TSK

TSK · ರೋಮಾಪುರದವರಿಗೆ 4:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಇದಲ್ಲದೆ›‹ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.›

ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.

ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.

ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.