ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
TSK
TSK · ರೋಮಾಪುರದವರಿಗೆ 4:6
Treasury of Scripture Knowledge references in ಕನ್ನಡ IRV.
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”
‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,