ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?
TSK
TSK · ರೋಮಾಪುರದವರಿಗೆ 5:1
Treasury of Scripture Knowledge references in ಕನ್ನಡ IRV.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.
“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›
¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›
ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.
ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
¶ ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.